ಹಲೋ ಸ್ನೇಹಿತರೇ, ತೋಟಗಾರಿಕೆಯಲ್ಲಿ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳುವುದು ಮೊದಲ ಆದ್ಯತೆಯಾಗಿದೆ. ತೋಟಗಾರಿಕೆ ಬೆಳೆಗೆ ಪ್ರಮುಖ ಸಂಪನ್ಮೂಲವಾದದ್ದು ಜೀವಜಲ ನೀರು. ನೀರು ಮಿತವಾಗಿ ಬಳಸಿ ಮತ್ತು ರೈತರು ಉತ್ತಮವಾದ ಫಸಲನ್ನು ಪಡೆಯುವ ಹಿನ್ನೆಲೆಯಲ್ಲಿ ಹನಿ ನಿರಾವರಿ ಮತ್ತು ತುಂತುರು ನೀರಾವರಿಯ ಯೋಜನೆಯನ್ನು ತೋಟಗಾರಿಕೆ ಇಲಾಖೆಯು ಅನುಷ್ಠಾನವನ್ನು ಮಾಡುತ್ತಿದೆ.

ಸೂಕ್ಷ್ಮ ನೀರಾವರಿಯ ಯೋಜನೆಯನ್ನು ರಾಷ್ಟ್ರೀಯ ಸೂಕ್ಷ್ಮವಾದ ನೀರಾವರಿಯ ಮಿಷನ್ ಆಗಿ ಮರು ನಾಮಕರಣವನ್ನು ಮಾಡಲಾಗಿತ್ತು. ಅನಂತರ 2014-15ನೇ ಸಾಲಿನಲ್ಲಿ ಸೂಕ್ಷ್ಮವಾದ ನೀರಾವರಿ ಕಾರ್ಯಕ್ರಮವನ್ನು ರಾಷ್ಟ್ರೀಯ ಸುಸ್ಥಿರವಾದ ಕೃಷಿ ಅಭಿಯಾನದ ಅಡಿ ಅನುಷ್ಠಾನಗೊಳಿಸಲಾಗಿತ್ತು.
ಮಾನದಂಡವೇನು? : ಈ ಯೋಜನೆಯ ಅಡಿಯಲ್ಲಿ ಸಹಾಯಧನವನ್ನು ಪಡೆದುಕೊಳ್ಳಲು ರೈತರು ಕೆಲವೊಂದು ಮಾನದಂಡಗಳನ್ನು ಹೊಂದಿರಬೇಕು. ತಮ್ಮದೇ ಆದಂತಹ ಹೆಸರಿನಲ್ಲಿ ರೈತರು ಜಮೀನನ್ನು ಹೊಂದಿರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟವಾದ ಪಂಗಡ ಜಾತಿಯ ರೈತರು ಜಾತಿ ಹಾಗೂ ಆದಾಯ ಪ್ರಮಾಣ ಪತ್ರವನ್ನು ಹೊಂದಿರಲೇಬೇಕು.
ಅರ್ಜಿಯನ್ನು ಸಲ್ಲಿಸಿ ಅದು ಅನುಮೋದನೆಯಾದ ಅನಂತರ ರೈತರು ತೋಟಗಾರಿಕೆ ಇಲಾಖೆಯ ವತಿಯಿಂದ ಅನುಮೋದನೆಗೊಂಡ ಕಂಪನಿ/ಡೀಲರ್ ಅವರಿಂದ ಹನಿ ನೀರಾವರಿಯ ಪದ್ಧತಿ ಅಳವಡಿಸಿಕೊಳ್ಳಬಹುದು.
ಇದನ್ನೂ ಓದಿ: ಮಹಿಳಾ ಸರ್ಕಾರಿ ನೌಕರರಿಗೆ ಹೊಸ ರಜೆ ನೀತಿ ಜಾರಿ!
ಯೋಜನೆಯ ಲಾಭ ಯಾರಿಗೆ? : ಈ ಯೋಜನೆಯ ಅಡಿಯಲ್ಲಿ ಸಾಮಾನ್ಯ ವರ್ಗ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಬೇರೆ ರೀತಿಯ ಸೌಲಭ್ಯಗಳಿವೆ. ಹನಿ ನೀರಾವರಿಯ ಯೋಜನೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ ಮತ್ತು ಹೊಸಕೋಟೆ ಹಾಗೂ ನೆಲಮಂಗಲ ತಾಲೂಕುಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದ್ದು, ಹನಿ ನೀರಾವರಿಯ ಘಟಕ ನಿರ್ಮಾಣ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಅಳವಡಿಸುವ ರೈತರಿಗೆ ಆಯಾ ಬೆಳೆಗಳು ಹಾಗೂ ಬೆಳೆಗಳ ಅಂತರಕ್ಕನುಗುಣವಾಗಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ರೈತರಿಗೆ ಪ್ರಥಮ 2 ಹೆಕ್ಟೇರ್ಗೆ ಮಾರ್ಗಸೂಚಿಯನ್ವಯ ನಿಗದಿಪಡಿಸಿರುವಂತಹ ವೆಚ್ಚದ ಶೇ.90 ರಷ್ಟು ಸಹಾಯಧನವನ್ನು ಮತ್ತು ಇತರೆ ವರ್ಗದ ರೈತರಿಗೆ ಶೇ.75ರಷ್ಟು ಸಹಾಯಧನವನ್ನು ನೀಡಲಾಗುವುದು.
2 ಹೆಕ್ಟೇರ್ಗೆ ಮೇಲ್ಪಟ್ಟು 5 ಹೆಕ್ಟೇರ್ ವರೆಗೆ ಶೇ. 45ರಷ್ಟು ಸಹಾಯಧನವನ್ನು ನೀಡಲಾಗುವುದು. ಈ ಸೌಲಭ್ಯವನ್ನು ಪ್ರತಿಯೊಂದು ಫಲಾನುಭವಿಗೆ 5 ಹೆಕ್ಟೇರ್ ಪ್ರದೇಶದವರೆಗೆ ಮಿತಿಗೊಳಿಸಲಾಗಿದೆ.
ತೋಟಗಾರಿಕೆಯಲ್ಲಿ ಕೃಷಿ ಮಾಡುತ್ತಿರುವ ಹಾಗೂ ನೀರಾವರಿಯ ಮೂಲ ಹೊಂದಿರುವ ರೈತರು ತಮ್ಮ ಜಮೀನಿಗೆ ಹನಿ ನೀರಾವರಿ ಅಳವಡಿಸಿಕೊಳ್ಳಲು ಆಸಕ್ತಿ ಇದ್ದಲ್ಲಿ ತಮ್ಮ ಜಮೀನು ವ್ಯಾಪ್ತಿಯ ಹೋಬಳಿಯ ರೈತ ಸಂಪರ್ಕ ಕೇಂದ್ರ ಅಥವಾ ತಾಲ್ಲೂಕು ಕಚೇರಿಯ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಿ ಹನಿ ನೀರಾವರಿ ಅಳವಡಿಸಲು ನಿಗದಿತ ಅರ್ಜಿಯನ್ನು ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ, ಸಂಬಂಧಿಸಿದ ತಾಲೂಕು ತೋಟಗಾರಿಕೆ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇತರೆ ವಿಷಯಗಳು:
ಇನ್ಮುಂದೆ ಆಸ್ಪತ್ರೆ ಬಿಲ್ ಬರೋದೆ ಇಲ್ಲ.!! ‘ಆಧಾರ್’ ಇದ್ರೆ ಸಿಗುತ್ತೆ 5 ಲಕ್ಷ ರೂ.