ಹಲೋ ಸ್ನೇಹಿತರೇ, ಕರ್ನಾಟಕ ಸರ್ಕಾರ ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳ ನೌಕರರಿಗೆ 38 ತಿಂಗಳ ಅರಿಯರ್ಸ್ ಬಾಕಿ ಹಣದ ಬಿಡುಗಡೆ ಮಾಡಿಲ್ಲ. 2024ರ ಜನವರಿಯಿಂದ ನೌಕರರಿಗೆ ಸಂಬಳವನ್ನು ಹೆಚ್ಚಳ ಮಾಡಬೇಕಿತ್ತು, ಆದ್ರೆ ನವೆಂಬರ್ ತಿಂಗಳು ಬಂದರೂ ಇನ್ನೂ ಈ ಬಗ್ಗೆ ಸರ್ಕಾರವು ತೀರ್ಮಾನ ಕೈಗೊಂಡಿಲ್ಲ. ನಿವೃತ್ತಿಯನ್ನು ಹೊಂದಿದ ನೌಕರರಿಗೆ ಗ್ರಾಚ್ಯುಟಿಯ ಹಣವನ್ನು ಬಿಡುಗಡೆಯನ್ನು ಮಾಡಿಲ್ಲ. ಅರಿಯರ್ಸ್ ಹಣವೇ ಒಟ್ಟು 1750 ಕೋಟಿ ರೂಪಾಯಿ ನೀಡಬೇಕಿದೆ. ಗ್ರಾಚ್ಯುಟಿ ಹಣವನ್ನು ಸುಮಾರು 399.29 ಕೋಟಿ ರುಪಾಯಿ ನೀಡಬೇಕಿದೆ. ಈ ಹಿನ್ನೆಲೆಯಲ್ಲಿ ಸಾರಿಗೆ ನೌಕರರು ಮತ್ತೊಮ್ಮೆ ಸಾರಿಗೆ ಮುಷ್ಕರಕ್ಕೆ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದ್ದಾರೆ.

ಬೇಡಿಕೆಗಳ ಈಡೇರಿಕೆಗೆ ಸರ್ಕಾರಕ್ಕೆ ಒತ್ತಡವನ್ನು ಹಾಕುವ ಸಂಬಂದ ಶುಕ್ರವಾರ ಆರು ಸಾರಿಗೆ ನೌಕರರ ಸಂಘಟನೆಗಳ ಜಂಟಿಯಾಗಿ ಕ್ರಿಯಾ ಸಮಿತಿಯು ಗಾಂಧಿನಗರದ ಸಿಐಟಿಯು ಮುಖ್ಯ ಕಚೇರಿಯಲ್ಲಿ ಸಭೆ ನಡೆಸಿತು. ಈ ವೇಳೆ ಮಾತನಾಡಿದ ಸಾರಿಗೆ ಮುಖಂಡರಾದ ಅನಂತ್ ಸುಬ್ಬರಾವ್ ರವರು ಖ್ಯಮಂತ್ರಿಯಲ್ಲಿ ಕೇಳಿ ಕೊಳ್ಳುವುದಿಷ್ಟೆ; ಈ ಹಿಂದೆಯೇ ನೀವು ಸಿಎಂ ಆಗಿದ್ದಾಗ, ನಾವು ಮೂರು ದಿನ ಮುಷ್ಕರವನ್ನು ಮಾಡಿದ್ದೆವು. ಅನಂತರ ಮೂರನೇ ದಿನ ನಮ್ಮ ಬೇಡಿಕೆಯನ್ನು ಈಡೇರಿಸಲು ಮುಂದಾಗಿದ್ದಿರಿ. ಈ ಬಾರಿ ಆ ಪರಿಸ್ಥಿತಿ ತರಬೇಡಿ. ಈಗಾಗಲೇ ಸಾರಿಗೆ ನೌಕರರು ಮುಷ್ಕರ ಮಾಡುವ ಮನಸ್ಥಿತಿಯಲ್ಲಿದ್ದಾರೆ ಎಂದರು.
ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಸಾರಿಗೆ ನೌಕರರು
ಕಾನೂನನ್ನು ಕೈಗೆ ತೆಗೆದುಕೊಳ್ಳಬೇಡಿ ಎಂದು ನಾವು ನೌಕರರಿಗೆ ಈಗಾಗಲೇ ಹೇಳಿದ್ದೇವೆ. ನಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೂ ನಮ್ಮ ಮುಷ್ಕರ ವಾಪಸ್ಸು ಪಡೆಯಲ್ಲ. ಇದು ಬಹಳ ಸ್ಪಷ್ಟ, ನೌಕರರು ಮುಷ್ಕರಕ್ಕೆ ಸಿದ್ಧರಾಗಿದ್ದಾರೆ. ನಾವು ಈಗ ಮುಷ್ಕರದ ದಿನಾಂಕವನ್ನು ಘೋಷಣೆ ಮಾಡುವುದಷ್ಟೇ ಬಾಕಿ. ಇಲ್ಲಿಯವರೆಗೆ ನಮಗೆ ಸರ್ಕಾರದಿಂದ ಯಾವುದೇ ಉತ್ತರ ಬಂದಿಲ್ಲ. ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ದರಾಗಿದ್ದಾರೆ. ನಾವು ದಿನಾಂಕ ಘೋಷಣೆ ಮಾಡುತ್ತೇವೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಇದನ್ನು ಓದಿ: ಸಿಎಂನಿಂದ ಬಂತು ಖಡಕ್ ವಾರ್ನಿಂಗ್!! 20 ಲಕ್ಷಕ್ಕೂ ಅಧಿಕ ರೇಷನ್ ಕಾರ್ಡ್ ರದ್ದು
ಸಭೆಯಲ್ಲಿ ಭಾಗಿಯಾಗಿದ್ದ 6 ಸಂಘಟನೆಗಳ ಅಧ್ಯಕ್ಷರು ಕೂಡ ಮುಷ್ಕರಕ್ಕೆ ಸದ್ಯದಲ್ಲೇ ಕರೆಯನ್ನು ನೀಡುತ್ತೇವೆ ಎಂಬ ಎಚ್ಚರಿಕೆಯನ್ನು ಸರ್ಕಾರಕ್ಕೆ ನೀಡಿದ್ದಾರೆ. ಈ ವೇಳೆಯಲ್ಲಿ ಮಾತನಾಡಿದ ಸಾರಿಗೆ ಮುಖಂಡರಾದ ಹೆಚ್.ಎಸ್. ಮಂಜುನಾಥ್, 1-1-24 ರಿಂದ ವೇತನ ಪರಿಷ್ಕರಣೆ ಆಗಬೇಕು. ಜನವರಿಯಲ್ಲಿ ನಮ್ಮ ಬೇಡಿಕೆಗಳನ್ನು ನೀಡಿದ್ದೇವೆ. ಹತ್ತಾರು ಪತ್ರಗಳನ್ನು ಬರೆದಿದ್ದೇವೆ.
38 ತಿಂಗಳ ಅರಿಯರ್ಸ್ ನೀಡಬೇಕು ಎಂದು ಹೇಳಿದ್ದೇವೆ. ಕಳೆದ ತಿಂಗಳಗಳಲ್ಲಿ ಮೀಟಿಂಗ್ ನಲ್ಲೂ ನಮ್ಮ ಬೇಡಿಕೆಗಳನ್ನು ಈಡೇರಿಸಲು ಹೇಳಿದ್ದೇವೆ ಆದ್ರೆ ಇನ್ನೂ ಸಾರಿಗೆ ನೌಕರರು ತಾಳ್ಮೆಯಿಂದ ಕಾಯುವ ಪರಿಸ್ಥಿತಿಯಲ್ಲಿಲ್ಲ. ಖಂಡಿತವಾಗಿಯೂ ಸಹ ರಾಜ್ಯದ 1.15 ಲಕ್ಷದಷ್ಟು ನೌಕರರು ಅನಿವಾರ್ಯವಾಗಿ ನೂರಕ್ಕೆ ನೂರರಷ್ಟು ಮುಷ್ಕರಕ್ಕೆ ಇದೀಗ ಹೋಗುತ್ತೇವೆ ಎಂದು ತಿಳಿಸಿದ್ದಾರೆ. ಇದರಲ್ಲಿ ಯಾವುದೇ ಸಂಶಯವಿಲ್ಲ ಎಂದು ತಿಳಿಸಿದ್ದಾರೆ.
ಒಟ್ಟಿನಲ್ಲಿ ರಾಜ್ಯ ಸರ್ಕಾರ ಸಾರಿಗೆ ನೌಕರರಿಗೆ ನೀಡಬೇಕಿರುವ 38 ತಿಂಗಳ ಅರಿಯರ್ಸ್, ನಿವೃತ್ತಿಯಾದ ನೌಕರರಿಗೆ ಗ್ರಾಚ್ಯುಟಿ ಹಣ ನೀಡುತ್ತಿಲ್ಲ ಎಂದು ಸಾರಿಗೆ ನೌಕರರು ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮದ ಬಸ್ಗಳ ಕಾರ್ಯಾಚರಣೆ ನಿಲ್ಲಿಸಿ ಮುಷ್ಕರ ಮಾಡುತ್ತೇವೆ ಎಂಬ ಎಚ್ಚರಿಕೆ ನೀಡಿದ್ದಾರೆ. ಸದ್ಯದಲ್ಲೇ ದಿನಾಂಕವನ್ನೂ ಘೋಷಣೆ ಮಾಡುತ್ತೇವೆ ಎಂಬ ಎಚ್ಚರಿಕೆ ನೀಡಿದೆ. ಆದರೆ ರಾಜ್ಯ ಸರ್ಕಾರ ಈ ಬಗ್ಗೆ ಯಾವ ಕ್ರಮ ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಇತರೆ ವಿಷಯಗಳು:
ರಾಜ್ಯದಲ್ಲಿ 22 ಲಕ್ಷ ರೇಷನ್ ಕಾರ್ಡ್ ರದ್ದು ನಿಮ್ಮ ಹೆಸರು ಇದೆಯಾ ನೋಡಿ !
ಮತ್ತೆ ಸೋಲಿನ ಸರದಾರನಾದ ನಿಖಿಲ್ ಕುಮಾರ್ ಸ್ವಾಮಿ.! ಈ ಸೋಲಿಗೆ ಕಾರಣ ಏನು?