ವಿದ್ಯಾರ್ಥಿಗಳಿಗೆ ‘ಮರುಸಿಂಚನ’ ಯೋಜನೆ ಅನುಷ್ಟಾನ.!

ಹಲೋ ಸ್ನೇಹಿತರೆ, ವಿದ್ಯಾರ್ಥಿಗಳಿಗೆ ಮರುಸಿಂಚನ ಕಾರ್ಯಕ್ರಮ ಅನುಷ್ಟಾನಗೊಳಿಸುವಂತೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಈ ಯೋಜನೆ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಈ ಲೇಖನವನ್ನು ಕೊನೆವರೆಗೂ ಓದಿ.

marusinchana karnataka

ಮುಖ್ಯಮಂತ್ರಿಗಳ 2024-25ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದ “ಮರುಸಿಂಚನ” ಕಾರ್ಯಕ್ರಮವನ್ನು ತಾಲ್ಲೂಕುಗಳ ಸರ್ಕಾರಿ ಶಾಲೆಗಳ 6 ಮತ್ತು 7ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಜಾರಿಗೆ ತರಲಾಗಿದೆ, ಈಗಾಗಲೇ ರಾಜ್ಯಮಟ್ಟದ ಮತ್ತು ಜಿಲ್ಲಾ ಮಟ್ಟದ ತರಬೇತಿಗಳನ್ನು ಯಶಸ್ವಿಯಾಗಿ ಮಾಡಲಾಗಿದೆ. ಈ ಕಾರ್ಯಕ್ರಮದ ಉದ್ದೇಶ ವಿದ್ಯಾರ್ಥಿಗಳಲ್ಲಿ ಕಲಿಕಾ ನ್ಯೂನತೆಗಳನ್ನು ಸರಿಪಡಿಸಿ, ತರಗತಿಗನುಗುಣವಾದ ಕಲಿಕಾ ಫಲಗಳನ್ನು ಸಾಧಿಸಲು ಹಿಂದಿನ ತರಗತಿಗಳ ಕಲಿಕೆಯನ್ನು ವೃದ್ಧಿಸುವುದು, ಪ್ರಮಾಣೀಕೃತ ಮೌಲ್ಯಮಾಪನವನ್ನು ಕೈಗೊಳ್ಳುವುದು ಹಾಗೂ 10ನೇ ತರಗತಿಯ ಪರೀಕ್ಷಾ ಫಲಿತಾಂಶವನ್ನು ಉತ್ತಮವಾಗಿ ಸಾಧಿಸುವುದು.

ಇದನ್ನು ಓದಿ: ‘ಪದವಿ’ ಪಾಸಾದವರಿಗೆ ಭರ್ಜರಿ ನ್ಯೂಸ್.!! 13,735 ಹುದ್ದೆಗಳಿಗೆ ಅರ್ಜಿ ಆಹ್ವಾನ

ಮರುಸಿಂಚನ ಕಾರ್ಯಕ್ರಮವನ್ನು ಶಾಲಾ ಮಟ್ಟದ ಚಟುವಟಿಕೆಗಳನ್ನು ದಿನಾಂಕ 23-12-2024 ರಿಂದ ನಡೆಸಲಾಗುವುದು. ಈ ಶೈಕ್ಷಣಿಕ ವರ್ಷದಲ್ಲಿ ಕನ್ನಡ ಭಾಷೆ, ಇಂಗ್ಲೀಷ್ ಭಾಷೆ, ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ವಿಷಯಗಳಲ್ಲಿ ವಿದ್ಯಾರ್ಥಿಗಳಿಗೆ “ವಿದ್ಯಾರ್ಥಿಗಳ ಚಟುವಟಿಕೆ ಪುಸ್ತಕ” ಮತ್ತು ಶಿಕ್ಷಕರಿಗೆ “ಶಿಕ್ಷಕರ ಕೈಪಿಡಿ” ಗಳನ್ನು ಪ್ರತಿ ವಿಷಯಕ್ಕೆ ನೀಡಲಾಗಿದೆ.

ಮರುಸಿಂಚನ ಕಾರ್ಯಕ್ರಮದ ಚಟುವಟಿಕೆಗಳನ್ನು ನಿಗದಿಪಡಿಸಿರುವ ಶಿಕ್ಷಕರ ಕೈಪಿಡಿಯನ್ನು ಅನುಸರಿಸಿ ವಿದ್ಯಾರ್ಥಿಗಳು ಚಟುವಟಿಕೆಗಳನ್ನು ತರಗತಿಯಲ್ಲಿ ತೊಡಗಿಸಿಕೊಳ್ಳುವಂತೆ ಶಿಕ್ಷಕರು, ಕಾರ್ಯಪ್ರವೃತರಾಗಬೇಕಾಗಿದೆ. ಈ ಎಲ್ಲಾ ಚಟುವಟಿಕೆಗಳ ಕಾರ್ಯಸೂಚಿಯನ್ನು ಈ ಪತ್ರದ ಜೊತೆಯಲ್ಲಿ ಲಗತ್ತಿಸಲಾಗಿದೆ. ಶಿಕ್ಷಕರು, ಮುಖ್ಯಶಿಕ್ಷಕರು ಮತ್ತು ಜಿಲ್ಲಾಮಟ್ಟದ ಅಧಿಕಾರಿಗಳು ಕಾರ್ಯಸೂಚಿಯನ್ನು ಗಣನೆಗೆ ತೆಗೆದುಕೊಂಡು, ಪ್ರತಿಚಟುವಟಿಕೆಯನ್ನು ನಿಗಧಿತ ದಿನಾಂಕದ ಒಳಗೆ ಪೂರ್ಣಗೊಳಿಸಲು ಈ ಮೂಲಕ ಸೂಚಿಸಲಾಗಿದೆ.

ಇತರೆ ವಿಷಯಗಳು:

ಹೊಸ ವರ್ಷಕ್ಕೆ ಮೋದಿ ಗೇಮ್‌ ಚೇಂಜಿಗ್ ಯೋಜನೆಗಳು! ಇಂದೇ ಅರ್ಜಿ ಸಲ್ಲಿಸಿ

ಜನ ಸಾಮಾನ್ಯರಿಗೆ ಸಿಹಿ ನ್ಯೂಸ್.!!‌ ಈ ಯೋಜನೆಗೆ ಕುಟುಂಬದಲ್ಲಿ ಇಬ್ಬರು ಅರ್ಜಿ ಸಲ್ಲಿಸಿ

Leave a Comment

rtgh