ಹಲೋ ಸ್ನೇಹಿತರೆ, ನಿರಂತರ ದರ ಏರಿಕೆಯಿಂದ ಕಂಗಾಲಾಗಿರುವ ರಾಜ್ಯದ ಜನತೆಗೆ ಸರ್ಕಾರ ಮತ್ತೊಂದು ಶಾಕ್ ನೀಡುವ ಸೂಚನೆ ನೀಡಿದೆ. ಕರ್ನಾಟಕ ಹಾಲು ಒಕ್ಕೂಟವು ನಂದಿನಿ ಹಾಲಿನ ದರ ಮತ್ತೆ ಹೆಚ್ಚಿಸುವ ಸಾಧ್ಯತೆ ಇದೆ. ಈ ಹಿಂದೆ ಪ್ರತಿ ಲೀಟರ್ನಲ್ಲಿ ಹೆಚ್ಚುವರಿಯಾಗಿ 50 ಎಂಎಲ್ ನೀಡಿ 2 ರೂಪಾಯಿ ಏರಿಕೆ ಮಾಡಲಾಗಿತ್ತು.

ಇದೀಗ, ಮತ್ತೆ ಕೆಎಂಎಫ್ ಹಾಲಿನ ದರ ಏರಿಕೆ
ಇದೀಗ ರೈತರು ಹಾಗೂ ಹಾಲು ಉತ್ಪಾದಕರು ಲೀಟರ್ಗೆ 5 ರೂಪಾಯಿ ಏರಿಕೆಗೆ ಒತ್ತಾಯಿಸಿದ್ದಾರೆ. ಕೆಎಂಎಫ್ ಅಧ್ಯಕ್ಷರಾದ ಭೀಮಾ ನಾಯ್ಕ್ ಚಳಿಗಾಲದ ಅಧಿವೇಶನದ ನಂತರ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುವುದಾಗಿ ಮಾಹಿತಿ ತಿಳಿಸಿದ್ದಾರೆ.
ಕಳೆದ ಎರಡು ದಿನಗಳ ಹಿಂದೆ ನಂದಿನಿ ಹಾಲಿನ ದರದಲ್ಲಿ ಯಾವುದೇ ದರ ಏರಿಕೆ ಮಾಡುವುದಿಲ್ಲ ಎಂದು ಕೆಎಂಎಫ್ ಅಧ್ಯಕ್ಷ ಭೀಮಾ ನಾಯಕ್ ಹೇಳಿಕೆ ನೀಡಿದ್ದರು. ಆದರೆ ಇದೀಗ ಈ ಬಗ್ಗೆ ನಿಖರವಾಗಿ ಚಳಿಗಾಲದ ಅಧಿವೇಶನದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ತಿಳಿಸಿದ್ದಾರೆ.
ಇತರೆ ವಿಷಯಗಳು:
ಅಪ್ಪನ ‘ಆಸ್ತಿ’ಯಲ್ಲಿ ಮಗಳಿಗೆ ಪಾಲಿದೆಯಾ.? ಯಾರಿಗೆ ಎಷ್ಟು ಪಾಲು.?
ಮಾಜಿ ಸಿಎಂ ‘S.M ಕೃಷ್ಣ’ ನಿಧನ: ರಾಜ್ಯದ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಿಗೆ ನಾಳೆ ರಜೆ