ಹಲೋ ಸ್ನೇಹಿತರೇ, ರಾಜ್ಯದ ಜನತೆಗೆ ನೆಮ್ಮದಿ ಸುದ್ದಿ ಎಂಬಂತೆ ಸದ್ಯಕ್ಕೆ ನಂದಿನಿ ಹಾಲಿನ ದರ ಏರಿಕೆ ಇಲ್ಲ ಎಂದು ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಹೇಳಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು ನಂದಿನಿ ಹಾಲಿನ ದರ ಏರಿಕೆ ಮಾಡುವಂತೆ ರಾಜ್ಯದ ರೈತರು ಬೇಡಿಕೆ ಇಟ್ಟಿದ್ದಾರೆ.
ಸದ್ಯಕ್ಕೆ ಇದೀಗ ನಂದಿನಿ ಹಾಲಿನ ದರವು ಏರಿಕೆಯಾಗಿಲ್ಲ, ಹಾಲಿನ ದರವು ಏರಿಕೆಗೆ ಯಾವುದೇ ಪ್ರಸ್ತಾವನೆ ಬಂದಿಲ್ಲ, ಈ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ ಎಂದರು. ಕೆಎಂಎಫ್ ಎಂಡಿ ವರ್ಗಾವಣೆಯಾಗಿದೆ, ಅದು ಆಡಳಿತಾತ್ಮಕ ನಿರ್ಧಾರವಾಗಿದೆ ಎಂದರು.
ಇದನ್ನು ಓದಿ: ಚಂಡಮಾರುತ ಅಬ್ಬರಕ್ಕೆ ಕೊನೆ ಯಾವಾಗ.? ಇನ್ನು ಎಷ್ಟು ದಿನ ಮಳೆ?
ರಾಜ್ಯದಲ್ಲಿ ಇದೀಗ ಮತ್ತೊಮ್ಮೆ ಹಾಲಿನ ದರವನ್ನು ಹೆಚ್ಚಳವನ್ನು ಮಾಡಲು ನಿರ್ಧರಿಸಿದ್ದು, ಶೀಘ್ರವೇ ಸಭೆಯನ್ನು ಕರೆಯಲಾಗುವುದು. ಹೆಚ್ಚಳವನ್ನು ಮಾಡಿದ ದರವನ್ನು ರೈತರಿಗೆ ನೀಡಲಾಗುವುದು ಎಂದು ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ಇತ್ತೀಚೆಗೆ ಹೇಳಿಕೆಯನ್ನು ನೀಡಿದ್ದಾರೆ. ಹಾಲಿನ ದರವನ್ನು ಹೆಚ್ಚಳದ ಜೊತೆಗೆ ಡೇರಿಗಳಿಗೆ ಪ್ರತಿ ಲೀಟರ್ ಹಾಲಿಗೆ 20 ಪೈಸೆ ಕೊಡುವಂತೆ ಒಕ್ಕೂಟದವರು ಕೇಳುತ್ತಿದ್ದು, ಈ ಸಂಬಂಧ ಕೆಎಂಎಫ್ ಹಾಗೂ ಹಾಲು ಒಕ್ಕೂಟಗಳ ಅಧ್ಯಕ್ಷರ ಸಭೆ ಕರೆದು ಚರ್ಚಿಸಿ ತೀರ್ಮಾನವನ್ನು ಮಾಡುವುದಾಗಿ ಸಿಎಂರವರು ತಿಳಿಸಿದ್ದರು.ಕಳೆದ ಜೂನ್ ನಲ್ಲಿ ಹಾಲಿನ ಪ್ರಮಾಣ ಹೆಚ್ಚಳ ಮಾಡಿ ಪ್ರತಿ ಲೀಟರ್ ಗೆ ಹಾಲಿನ ದರವು ಎರಡು ರೂಪಾಯಿಯಷ್ಟು ಹೆಚ್ಚಳ ಮಾಡಲಾಗಿತ್ತು.
ಇತರೆ ವಿಷಯಗಳು:
ಪಿಎಂ ಕಿಸಾನ್ ಯೋಜನೆಯಲ್ಲಿ ಹೊಸ ರೂಲ್ಸ್.! ಈ ಕೆಲಸ ಮಾಡದಿದ್ರೆ ನಿಮಗಿಲ್ಲ 19ನೇ ಕಂತಿನ ಹಣ